ವ್ಯಕ್ತಿತ್ವ ವಿಕಸನ : ಭಾರತೀಯ ದೃಷ್ಟಿ
(Personality Development - Indian View)
ಸಂಪಾದಕ : ಡಾ.ಜಿ.ಎನ್.ಭಟ್
ಪ್ರಸ್ತುತ ಲೇಖನದ ಲೇಖಕ : ದಿ. ಡಾ.ದಯಾನಂದ ಶಾನಭಾಗ
(ಈ ಲೇಖನದ ಒಟ್ಟು ಸಾರವನ್ನು ಬರೆದವರು : ತೇಜಸ್ವಿನಿ ಹೆಗಡೆ)
‘ವ್ಯಕ್ತಿತ್ವ-ವಿಕಸನ’ ಎಂಬ ವಿಷಯದ ಬಗ್ಗೆ ಮನುಷ್ಯರಾದ ನಾವು ಯೋಚಿಸುವಂತೆ ಪಶು-ಪಕ್ಷಿಗಳಾಗಲೀ ಹುಳ-ಹುಪ್ಪಡಿಗಳಾಗಲೀ ಯೋಚಿಸುವುದೂ ಇಲ್ಲ, ಚಿಂತಿಸುವುದೂ ಇಲ್ಲ. ಏಕೆಂದರೆ ಅವುಗಳಿಗೆ ಅದರ ಅಗತ್ಯವಿಲ್ಲ. ಅವುಗಳ ವಿಕಾಸ(ಬೆಳವಣಿಗೆ) ಅನಾಯಾಸವಾಗಿ ಆಗುತ್ತಲೇ ಇರುತ್ತದೆ. ಆದರೆ ಮನುಷ್ಯನ ಬದುಕಿನ ರೀತಿಯೇ ಬೇರೆ. ಅವನು ನೆಲದಲ್ಲಿ ನೆಲೆಸುವಂತೆ ನೀರಿನಲ್ಲೂ ಬದುಕಬಲ್ಲ. ಆಕಾಶದಲ್ಲೂ ಹಾರಾಡಬಲ್ಲ. ಮಾಂಸ ತಿಂದು ಅರಗಿಸಬಲ್ಲ. ಹುಲ್ಲು ತಿಂದೂ ಬದುಕಬಲ್ಲ. ಈತ ತ್ಯಾಗಿಯೂ ಆಗ ಬಲ್ಲ, ಭೋಗಿಯೂ ಆಗಬಲ್ಲ. ಪ್ರಾಣ ಕೊಡಬಲ್ಲ, ಪ್ರಾಣ ಕೊಳ್ಳಬಲ್ಲ. ತನ್ನ ಜೀವನವನ್ನು ರೂಪಿಸಬಲ್ಲನಷ್ಟೇ ಅಲ್ಲ ತನಗೆ ಬೇಕಾದ ಜಗತ್ತನ್ನೂ ನಿರ್ಮಿಸಬಲ್ಲ, ಕಟ್ಟಬಲ್ಲ, ಕೆಡವಬಲ್ಲ. ಇದು ಮನುಷ್ಯಜೀವನಕ್ಕೆ ಸಂಬಂಧಿಸಿದ ಸತ್ಯಸಂಗತಿ. ಇದನ್ನು ಭಾರತೀಯ ಋಷಿ-ಮುನಿಗಳು ಸಾವಿರಾರು ವರುಷಗಳ ಹಿಂದೆಯೇ ಕಂಡುಕೊಂಡರು. ಈ ಸತ್ಯವನ್ನಲ್ಲದೇ ನಮ್ಮ ಪೂರ್ವಜರು ಇನ್ನೊಂದು ಐತಿಹಾಸಿಕ ಸತ್ಯವನ್ನೂ ಅರಿತಿಕೊಂಡರು. ಅದೆಂದರೆ ವಿಶ್ವದ ಆರಂಭದಿಂದಲೂ ಇಡಿಯ ಜಗತ್ತಿನ ಆಗುಹೋಗುಗಳಿಗೆ ಮನುಷ್ಯನೇ ಕಾರಣ. ಜಗತ್ತಿನಲ್ಲಿ ಹಿಂದೆ ಆಗಿಹೋದ, ಇಂದಾಗುತ್ತಿರುವ, ಮುಂದೆ ಆಗಬಹುದಾದ ಉನ್ನತಿ-ಅವನತಿಗಳಿಗೆಲ್ಲಾ ಮನುಷ್ಯನೇ ಕಾರಣ. ಅದಕ್ಕಾಗಿಯೇ ಪೂರ್ವಜರು-ಭಾರತೀಯರು-ಮಾನವರು ದಾನವತ್ವದ ಕಡೆ ಹೊರಳದೇ ದೇವತ್ವದ ಕಡೆ ಮುನ್ನಡೆಯುವಂತೆ ಅವನ ಬೆಳವಣಿಗೆಯ ಅಂದರೆ ‘ವ್ಯಕ್ತಿತ್ವ ವಿಕಸನ’ದ ರಾಜಮಾರ್ಗ ಕಂಡುಹಿಡಿದರು.
‘ವ್ಯಕ್ತಿತ್ವ-ವಿಕಸನ’ ಎಂಬುದನ್ನು ತಿಳಿಯಬೇಕಾದರೆ ‘ವ್ಯಕ್ತಿತ್ವ’ ಎಂಬುದರ ಅರ್ಥ ತಿಳಿಯಬೇಕಾಗುತ್ತದೆ. ಮನುಷ್ಯನ ವ್ಯಕ್ತಿತ್ವದಲ್ಲಿ ಪ್ರಮುಖವಾಗಿ ಮೂರು ಅಂಗಗಳು ಕೂಡಿಕೊಂಡಿವೆ. ಅವುಗಳೆಂದರೆ ಬುದ್ಧಿ, ಮನಸ್ಸು ಮತ್ತು ಇಂದ್ರಿಯಗಳುಳ್ಳ ದೇಹ. ಇವುಗಳಲ್ಲಿ ಬುದ್ಧಿ ಒಂದೆಡೆಯಿದ್ದರೆ ಇಂದ್ರಿಯಗಳು ಇನ್ನೊಂದು ಕಡೆ ಇವೆ. ಬುದ್ಧಿಯಲ್ಲಿ ಅರಿವು ತುಂಬಿ ಅದು ಪ್ರಬಲವಾದರೆ ಅದರಂತೆ ಮನಸ್ಸು-ಇಂದ್ರಿಯಗಳು ಕಾರ್ಯಪ್ರವೃತ್ತವಾಗುತ್ತವೆ. ಹೀಗಾದಾಗಲೇ ಮಾನವನು ದೇವನಾಗುವ ಸಾಧ್ಯತೆ ಅಧಿಕವಾಗುತ್ತದೆ. ತದ್ವಿರುದ್ಧವಾಗಿ, ಇಂದ್ರಿಯಗಳು ಬಲಶಾಲಿಯಾಗಿ ಅವುಗಳ ಇಚ್ಛೆಯಂತೆ ಮನಸ್ಸು-ಬುದ್ಧಿಗಳೆರಡೂ ಕೆಲಸ ಮಾಡತೊಡಗಿದರೆ ಮಾನವನು ದಾನವನಾಗುವ ಸಂಭವ ಬಲಿಯುತ್ತದೆ. ಶಾರೀರಿಕ ಅಂಗವೈಕಲ್ಯದಿಂದ ಮನುಷ್ಯನು ವಿಕಲಾಂಗನಾಗುವುದಿಲ್ಲ. ಆದರೆ ಬೌದ್ಧಿಕ ವೈಕಲ್ಯದಿಂದ ಸಂಪೂರ್ಣ ವಿಕಲಾಂಗನಾಗಿ ಪಶುವೇ ಆಗಿಬಿಡುತ್ತಾನೆ. ಆದುದರಿಂದ ಹಿತಕಾರಕ ವ್ಯಕ್ತಿತ್ವ ವಿಕಸನವಾಗಬೇಕಾದರೆ ಬುದ್ಧಿ ಬಲಶಾಲಿಯಾಗುವಂತೆ ಪ್ರಯತ್ನವಾಗಬೇಕು. ಒಳಿತು-ಕೆಡುಕುಗಳ ಅರಿವನ್ನು ತುಂಬಿದ ಬುದ್ಧಿಗೇ ‘ವಿವೇಕ’ವೆನ್ನುವರು. ಇಂತಹ ಬುದ್ಧಿಯೇ ಬಲಶಾಲಿ.
ಹಾಗಾದರೆ ಬುದ್ಧಿಯಲ್ಲಿ ಎಂತಹ ಅರಿವನ್ನು ತುಂಬಬೇಕೆಂಬುದನ್ನು ಯೋಚಿಸಬೇಕಾಗಿದೆ.
೧. ಮೊದಲನೆಯದಾಗಿ : ಮನುಷ್ಯನಾಗಿ ಜನ್ಮ ಪಡೆದ ಪ್ರತಿಯೊಬ್ಬ ಜೀವಿಯು ತಾನು ಸಂಪೂರ್ಣ ಮಾನವ ಸಮಜದ ಒಂದು ಅವಿಭಾಜ್ಯ ಅಂಗವೆಂಬುದರ ಅರಿವನ್ನು ಬುದ್ಧಿಯಲ್ಲಿ ತುಂಬಿಕೊಳ್ಳಬೇಕು. ನಮ್ಮ ಹಿರಿಯರು ಸಾರಿ ಸಾರಿ ಹೇಳಿದ್ದೂ ಇದನ್ನೇ ‘ವಸುಧೈವ ಕುಟುಂಬಕಮ್’.
೨. ಎರಡನೆಯದಾಗಿ : ಮನುಷ್ಯನನ್ನು ‘ಸಾಮಾಜಿಕ ಪ್ರಾಣಿ’ (Social Animal) ಎಂದು ಗುರುತಿಸಲಾಗಿದೆ. ಅಂದರೆ ಸಮಾಜದಲ್ಲಿದ್ದು, ಸಮಾಜದ ಸಹಾಯದಿಂದ, ಸಮಾಜದೊಡನೆ ಬದುಕುವ, ಬದುಕಬೇಕಾದ ಪ್ರಾಣಿಯು. ಸಮಾಜವನ್ನು ಬಿಟ್ಟು ಬದುಕುವುದು ಅಸಾಧ್ಯ,ಅವನ ಜೀವನದ ಬಹುಪಾಲು ಸಂಗತಿಗಳು ಅವನಿರುವ ಸಮಾಜದಿಂದಲೇ ನಿರ್ಧರಿಸಲ್ಪಡುತ್ತವೆ.
೩. ಮೂರನೆಯದಾಗಿ : ಮನುಷ್ಯನು "ತಾನು ಇತರರೊಡನೆ ಬದುಕಬೇಕು" ಅಂದರೆ "ತಾನೂ ಬದುಕಬೇಕು, ಇತರರನ್ನೂ ಬದುಕಬಿಡಬೇಕು" ಎಂಬ ನೀತಿಯನ್ನು ಬುದ್ಧಿಯಲ್ಲಿ ತುಂಬಿಕೊಂಡು ಅದನ್ನು ಕೃತಿಯಲ್ಲಿಳಿಸಬೇಕು. ಇದೆಲ್ಲ ದೇವರ ದೇಣಿಗೆ. ಮನುಷ್ಯರೆಲ್ಲ ಹಂಚಿಕೊಂಡು ತಿನ್ನಬೇಕು. ದೇವರು ನೀಡಿದ್ದನ್ನು ಇತರರಿಗೆ ಕೊಡದೇ ತಿನ್ನುವವನು ಕಳ್ಳ ಎನ್ನುವ ಅರಿವನ್ನು ಬುದ್ಧಿಯಲ್ಲಿ ತುಂಬಿಕೊಳ್ಳಬೇಕು. ಇದಕ್ಕೆ ಪೂರಕವಾಗಿದೆ ಬೇಂದ್ರೆಯವರ ಸೂತ್ರವಾಕ್ಯವೊಂದು - "ಸಮರಸವೇ ಜೀವನ".
ಈ ಸತ್ಯ ಪ್ರತಿಯೊಬ್ಬನ ಬುದ್ಧಿಯಲ್ಲಿ ಆಳವಾಗಿ ಬೇರೂರಿದಾಗಲೇ ಅವನ ಸಮರ್ಪಕ ಹಾಗೂ ಹಿತಕಾರಕ ವ್ಯಕ್ತಿತ್ವ-ವಿಕಸನ ಸಾಧ್ಯ. ಈ ಸತ್ಯಗಳಿಂದ ನಮ್ಮನ್ನು ವಿಮುಖಗೊಳಿಸುವ, ಮಾನವನಿಗೆ ಕೇಡುಂಟುಮಾಡುವ ಶಕ್ತಿಗಳು ಅಥವಾ ಶತ್ರುಗಳು ಅವನ ದೇಹದಲ್ಲೇ ಮನಮಾಡಿಕೊಂಡಿವೆ. ಅವೇ ಅರಿಷಡ್ವೈರಿಗಳು. (ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರ) ಈ ಒಳವೈರಿಗಳಿಗೆ ಸೋತ ಬುದ್ಧಿಯಿಂದಾಗಿ ಮನುಷ್ಯನು ಇಂದ್ರಿಯಗಳಿಗೆ ಗುಲಾಮನಾಗುತ್ತಾನೆ. ಅವನ ಅಧಃಪತನ ನಿಶ್ಚಿತವಾಗುತ್ತದೆ. ಜಿತೇಂದ್ರಿಯನು ಎಲ್ಲ ಗಳಿಸಿದರೆ, ಅಜಿತೇಂದ್ರಿಯನು ಎಲ್ಲ ಕಳಕೊಳ್ಳುತ್ತಾನೆ. ಹಾಗಾಗಿ ಇಂದ್ರಿಯ ನಿಗ್ರಹವು ವ್ಯಕ್ತಿತ್ವ-ವಿಕಸನದ ಒಂದು ಭಾಗವೇ ಆಗಿದೆ. ಹೀಗೆ ಸಕಲರ ಹಿತಕ್ಕಾಗಿ, ಎಲ್ಲರೊಡನೆ ಬಾಳುವ ಅಗತ್ಯವಿರುವ ಮನುಷ್ಯನು ಸಫಲ ಸುಖೀಜೀವನಕ್ಕಾಗಿ ಅನುಸರಿಸಬೇಕಾದ ಸೂತ್ರವೊಂದನ್ನು ನಮ್ಮ ಹಿರಿಯರು ದಯಪಾಲಿಸಿದ್ದಾರೆ. ಅದೆಂದರೆ, "ತನ್ನಂತೆ ಪರರ ಬಗೆ". ಈ ರೀತಿಯ ಬೌದ್ಧಿಕ ವಿಕಾಸಕ್ಕೆ, ವ್ಯಕ್ತಿತ್ವ-ವಿಕಸನಕ್ಕೆ ಅನುಕೂಲವಾಗುವಂತೆ ನಮ್ಮ ಹಿರಿಯರು ‘ಧರ್ಮದ’ ಬೋಧೆ ಮಾಡಿದರು. ಈ ಸಂದರ್ಭದಲ್ಲಿ ‘ಧರ್ಮದ’ ನಿಜವಾದ ಅರ್ಥ ತಿಳಿದುಕೊಳ್ಳಲೇಬೇಕು. ಇಂದು ಧರ್ಮವೆಂದರೆ ಕೇವಲ ‘religion’ ಅಂದರೆ ‘ದೇವರಲ್ಲಿ ನಂಬಿಕೆ’ ‘ಸಾಂಪ್ರದಾಯಿಕ ಪೂಜಾ-ಪಾಠ’ ಎಂದು ಮುಂತಾಗಿ ತಪ್ಪಾಗಿ ಅರ್ಥ ಮಾಡಿಕೊಂಡು ಧರ್ಮದ ಬಗೆಗೆ ಅಸಂಬದ್ಧ ಪ್ರಲಾಪ ಮಾಡುವವರು ಇದ್ದಾರೆ, ಹಿಂದೆಯೂ ಅಂತವರಿದ್ದರು; ಮುಂದೆಯೂ ಇರಬಹುದು. ಆದರೆ ನಮ್ಮ ಪೂರ್ವಿಕರ ಪ್ರಕಾರ ಧರ್ಮವೆಂದರೆ ಮನುಷ್ಯನಿಗೆ ‘ಮನುಷ್ಯತ್ವ’ ನೀಡುವುದು. ನಿಜವಾದ ಧರ್ಮದ ಅರ್ಥ ವಿಶಾಲವಾದುದು. ಮಾನವ ಜೀವನದ ಎಲ್ಲ ಅಂಗಗಳನ್ನೂ ಧರ್ಮವು ವ್ಯಾಮಿಸಿಕೊಂಡಿದೆ. ಅದು ಸರ್ವಾಧಾರ, ಸರ್ವವ್ಯಾಪಿ, ಸರ್ವಸುಖಪ್ರದ, ಸರ್ವತ್ರ ಶಾಂತಿಪ್ರಸಾರಕ. ಅದುವೇ ಮಾನವಧರ್ಮ, ವಿಶ್ವಧರ್ಮ, ಸನಾತನ ಧರ್ಮ, ಚಿರಂತನಧರ್ಮ, ಭಾರತೀಯಧರ್ಮ. ಅಂತಹ ಧರ್ಮದ ನಿಯಮಗಳು ಇಂತಿವೆ - ಅಹಿಂಸೆ, ಸತ್ಯ, ಕಳ್ಳತನವನ್ನು ಮಾಡದಿರುವುದು, ಶುದ್ಧಿ (ಮಾತು, ಶರೀರ, ಮನಸ್ಸು ಮತ್ತು ಕರ್ಮ), ಇಂದ್ರಿಯ ನಿಗ್ರಹ. ಮಾನವಧರ್ಮದ ಈ ನಿಯಮಗಳನ್ನು ಅರ್ಧೈಸಿ ಕೃತಿಯಲ್ಲಿಳಿಸಬೇಕು. ಆಗಲೇ ಸಂಪೂರ್ಣ ವ್ಯಕ್ತಿತ್ವ-ವಿಕಸನ ಸಾಧ್ಯ.
ವಿಕಸಿತ ವ್ಯಕ್ತಿತ್ವದ ಗುಣಮಟ್ಟ ಅಳೆಯುವುದು ಹೇಗೆ? ಅದು ಹಿತಕಾರಕವೋ ಅಹಿತಕಾರಕವೋ ಎಂದು ನಿರ್ಧರಿಸುವುದು ಹೇಗೆ? ಅದಕ್ಕೆ ತಕ್ಕ ಮಾನದಂಡದ ಬಗೆಗೂ ನಮ್ಮ ಹಿರಿಯರು ಯೋಚಿಸಿದ್ದಾರೆ. ಅದೇನೆಂದರೆ ‘ಬಿತಿದ್ದನ್ನು ಬೆಳೆದುಕೊ’, ’ಸತ್ಕೃತಿಯಿಂದ ಸುಖಫಲ, ಕುಕರ್ಮದಿಂದ ಕಹಿಫಲ’ - ಹೀಗೆ ನಮ್ಮ ಸುಖ-ದುಃಖಗಳಿಗೆ ನಮ್ಮ ಕೃತಿಯೇ ಕಾರಣ. ಆದುದರಿಂದ ವಿಕಸಿತ ವ್ಯಕ್ತಿತ್ವದಿಂದ ಹಿತವಾಗಬೇಕಾದರೆ ಅದು ಕೃತಿರೂಪ ಧರಿಸಿ ಪ್ರಕಟವಾಗಬೇಕು. ಹಿತಕಾರಕ ವ್ಯಕ್ತಿತ್ವ-ವಿಕಸನವಾದವನು ಸುಖಕಾರಕ ಸತ್ಕೃತಿ ಗೈದು ತೋರಿಸಬೇಕು. ಕೃತಿಯೇ ಒಬ್ಬನ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ. ಕೃತಿಯಿಂದಲೇ ವಿಕಸಿತ ವ್ಯಕ್ತಿತ್ವವನ್ನು ಅಳೆಯುವುದು ಸಾಧ್ಯ. ಹಾಗಿದ್ದರೆ ಸತ್ಕೃತಿಯನ್ನು ಪರೀಕ್ಷಿಸುವುದು ಹೇಗೆ? ಎನ್ನುವ ಸಂದೇಹ ತಲೆದೋರಬಹುದು. ಸತ್ಕೃತಿಯನ್ನು ಮೂರು ವಿಧವಾಗಿ ಪರೀಕ್ಷಿಸಿ ನಿರ್ಧರಿಸಲು ಬರುತ್ತದೆ.
೧. ಅದು ಎಲ್ಲರಿಗೂ ತಿಳಿಯಬೇಕೆಂದು ನಾವು ಬಯಸಬೇಕು
೨. ಅದನ್ನು ಮಾಡುವಾಗ ನಾವು ನಾಚಿಕೆ ಪಡಬಾರದು
೩. ಅದರಿಂದ ನಮ್ಮ ಅಂತರಾತ್ಮ ಸಂತುಷ್ಟವಾಗಬೇಕು. - ಇಂತಹ ಕೃತಿಯನ್ನೇ ಸತ್ಕೃತಿಯೆನ್ನುತ್ತೇವೆ.
ಅಂತಿಮವಾಗಿ : ನಮ್ಮ ಹಿರಿಯರು(ಪೂರ್ವಜರು) ಕಂಡು ಹಿಡಿದ ಇನ್ನೊಂದು ಸತ್ಯ ಹೀಗಿದೆ - ಮಾನವರೆಲ್ಲ ಪುಣ್ಯದ ಫಲವಾದ ಸುಖ ಬಯಸುತ್ತಾರೆ; ಆದರೆ ಪುಣ್ಯ ಕಾರ್ಯ ಮಾಡಬಯಸುವುದಿಲ್ಲ. ಅಂತೆಯೇ ಪಾಪದ ಫಲವಾದ ದುಃಖ ಬಯಸುವುದಿಲ್ಲ; ಆದರೆ ಪಾಪದ ಕಾರ್ಯ ಮಾಡೇ ಮಾಡುತ್ತಾರೆ. ಅಂದರೆ ಬೇವಿನ ಮರದಿಂದ ಮಾವು ಪಡೆಯ ಬಯಸುತ್ತಾರೆ. ಮನುಷ್ಯ ಜನಿಸಿದ್ದು ಸಾಯುವುದಕ್ಕಲ್ಲ, ಸಾಧಿಸಲಿಕ್ಕೆ. ಜನ್ಮ-ಮೃತ್ಯುಗಳು ಮನುಷ್ಯನ ಕೈಯಲ್ಲಿಲ್ಲವಾದರೂ ಅವುಗಳ ನಡುವಿನ ಜೀವನ-ಸಾಧನೆ ಪೂರ್ಣವಾಗಿ ಅವನ ಕೈಯಲ್ಲಿದೆ. ಅದಕ್ಕಾಗಿ ಅವನ ವ್ಯಕ್ತಿತ್ವ ಸುಯೋಗ್ಯವಾಗಿ ವಿಕಸಿತವಾಗಬೇಕು. ಅದುವೆ ನಿಜವಾದ ವ್ಯಕ್ತಿತ್ವ-ವಿಕಸನ. ಅದನ್ನು ಕುರಿತು ಭಾರತೀಯ ದೃಷ್ಟಿ ಸ್ಪಷ್ಟವಾಗಿದೆ. ವ್ಯಕ್ತಿತ್ವ-ವಿಕಸನದಿಂದಲೇ ಮಾನವ ಮಹಾಮಾನವನಾಗಬಲ್ಲ, ವಿಶ್ವಮಾನವನಾಗಬಲ್ಲ, ದೇವನಾಗಬಲ್ಲ.
(Personality Development - Indian View)
ಸಂಪಾದಕ : ಡಾ.ಜಿ.ಎನ್.ಭಟ್
ಪ್ರಸ್ತುತ ಲೇಖನದ ಲೇಖಕ : ದಿ. ಡಾ.ದಯಾನಂದ ಶಾನಭಾಗ
(ಈ ಲೇಖನದ ಒಟ್ಟು ಸಾರವನ್ನು ಬರೆದವರು : ತೇಜಸ್ವಿನಿ ಹೆಗಡೆ)
‘ವ್ಯಕ್ತಿತ್ವ-ವಿಕಸನ’ ಎಂಬ ವಿಷಯದ ಬಗ್ಗೆ ಮನುಷ್ಯರಾದ ನಾವು ಯೋಚಿಸುವಂತೆ ಪಶು-ಪಕ್ಷಿಗಳಾಗಲೀ ಹುಳ-ಹುಪ್ಪಡಿಗಳಾಗಲೀ ಯೋಚಿಸುವುದೂ ಇಲ್ಲ, ಚಿಂತಿಸುವುದೂ ಇಲ್ಲ. ಏಕೆಂದರೆ ಅವುಗಳಿಗೆ ಅದರ ಅಗತ್ಯವಿಲ್ಲ. ಅವುಗಳ ವಿಕಾಸ(ಬೆಳವಣಿಗೆ) ಅನಾಯಾಸವಾಗಿ ಆಗುತ್ತಲೇ ಇರುತ್ತದೆ. ಆದರೆ ಮನುಷ್ಯನ ಬದುಕಿನ ರೀತಿಯೇ ಬೇರೆ. ಅವನು ನೆಲದಲ್ಲಿ ನೆಲೆಸುವಂತೆ ನೀರಿನಲ್ಲೂ ಬದುಕಬಲ್ಲ. ಆಕಾಶದಲ್ಲೂ ಹಾರಾಡಬಲ್ಲ. ಮಾಂಸ ತಿಂದು ಅರಗಿಸಬಲ್ಲ. ಹುಲ್ಲು ತಿಂದೂ ಬದುಕಬಲ್ಲ. ಈತ ತ್ಯಾಗಿಯೂ ಆಗ ಬಲ್ಲ, ಭೋಗಿಯೂ ಆಗಬಲ್ಲ. ಪ್ರಾಣ ಕೊಡಬಲ್ಲ, ಪ್ರಾಣ ಕೊಳ್ಳಬಲ್ಲ. ತನ್ನ ಜೀವನವನ್ನು ರೂಪಿಸಬಲ್ಲನಷ್ಟೇ ಅಲ್ಲ ತನಗೆ ಬೇಕಾದ ಜಗತ್ತನ್ನೂ ನಿರ್ಮಿಸಬಲ್ಲ, ಕಟ್ಟಬಲ್ಲ, ಕೆಡವಬಲ್ಲ. ಇದು ಮನುಷ್ಯಜೀವನಕ್ಕೆ ಸಂಬಂಧಿಸಿದ ಸತ್ಯಸಂಗತಿ. ಇದನ್ನು ಭಾರತೀಯ ಋಷಿ-ಮುನಿಗಳು ಸಾವಿರಾರು ವರುಷಗಳ ಹಿಂದೆಯೇ ಕಂಡುಕೊಂಡರು. ಈ ಸತ್ಯವನ್ನಲ್ಲದೇ ನಮ್ಮ ಪೂರ್ವಜರು ಇನ್ನೊಂದು ಐತಿಹಾಸಿಕ ಸತ್ಯವನ್ನೂ ಅರಿತಿಕೊಂಡರು. ಅದೆಂದರೆ ವಿಶ್ವದ ಆರಂಭದಿಂದಲೂ ಇಡಿಯ ಜಗತ್ತಿನ ಆಗುಹೋಗುಗಳಿಗೆ ಮನುಷ್ಯನೇ ಕಾರಣ. ಜಗತ್ತಿನಲ್ಲಿ ಹಿಂದೆ ಆಗಿಹೋದ, ಇಂದಾಗುತ್ತಿರುವ, ಮುಂದೆ ಆಗಬಹುದಾದ ಉನ್ನತಿ-ಅವನತಿಗಳಿಗೆಲ್ಲಾ ಮನುಷ್ಯನೇ ಕಾರಣ. ಅದಕ್ಕಾಗಿಯೇ ಪೂರ್ವಜರು-ಭಾರತೀಯರು-ಮಾನವರು ದಾನವತ್ವದ ಕಡೆ ಹೊರಳದೇ ದೇವತ್ವದ ಕಡೆ ಮುನ್ನಡೆಯುವಂತೆ ಅವನ ಬೆಳವಣಿಗೆಯ ಅಂದರೆ ‘ವ್ಯಕ್ತಿತ್ವ ವಿಕಸನ’ದ ರಾಜಮಾರ್ಗ ಕಂಡುಹಿಡಿದರು.
‘ವ್ಯಕ್ತಿತ್ವ-ವಿಕಸನ’ ಎಂಬುದನ್ನು ತಿಳಿಯಬೇಕಾದರೆ ‘ವ್ಯಕ್ತಿತ್ವ’ ಎಂಬುದರ ಅರ್ಥ ತಿಳಿಯಬೇಕಾಗುತ್ತದೆ. ಮನುಷ್ಯನ ವ್ಯಕ್ತಿತ್ವದಲ್ಲಿ ಪ್ರಮುಖವಾಗಿ ಮೂರು ಅಂಗಗಳು ಕೂಡಿಕೊಂಡಿವೆ. ಅವುಗಳೆಂದರೆ ಬುದ್ಧಿ, ಮನಸ್ಸು ಮತ್ತು ಇಂದ್ರಿಯಗಳುಳ್ಳ ದೇಹ. ಇವುಗಳಲ್ಲಿ ಬುದ್ಧಿ ಒಂದೆಡೆಯಿದ್ದರೆ ಇಂದ್ರಿಯಗಳು ಇನ್ನೊಂದು ಕಡೆ ಇವೆ. ಬುದ್ಧಿಯಲ್ಲಿ ಅರಿವು ತುಂಬಿ ಅದು ಪ್ರಬಲವಾದರೆ ಅದರಂತೆ ಮನಸ್ಸು-ಇಂದ್ರಿಯಗಳು ಕಾರ್ಯಪ್ರವೃತ್ತವಾಗುತ್ತವೆ. ಹೀಗಾದಾಗಲೇ ಮಾನವನು ದೇವನಾಗುವ ಸಾಧ್ಯತೆ ಅಧಿಕವಾಗುತ್ತದೆ. ತದ್ವಿರುದ್ಧವಾಗಿ, ಇಂದ್ರಿಯಗಳು ಬಲಶಾಲಿಯಾಗಿ ಅವುಗಳ ಇಚ್ಛೆಯಂತೆ ಮನಸ್ಸು-ಬುದ್ಧಿಗಳೆರಡೂ ಕೆಲಸ ಮಾಡತೊಡಗಿದರೆ ಮಾನವನು ದಾನವನಾಗುವ ಸಂಭವ ಬಲಿಯುತ್ತದೆ. ಶಾರೀರಿಕ ಅಂಗವೈಕಲ್ಯದಿಂದ ಮನುಷ್ಯನು ವಿಕಲಾಂಗನಾಗುವುದಿಲ್ಲ. ಆದರೆ ಬೌದ್ಧಿಕ ವೈಕಲ್ಯದಿಂದ ಸಂಪೂರ್ಣ ವಿಕಲಾಂಗನಾಗಿ ಪಶುವೇ ಆಗಿಬಿಡುತ್ತಾನೆ. ಆದುದರಿಂದ ಹಿತಕಾರಕ ವ್ಯಕ್ತಿತ್ವ ವಿಕಸನವಾಗಬೇಕಾದರೆ ಬುದ್ಧಿ ಬಲಶಾಲಿಯಾಗುವಂತೆ ಪ್ರಯತ್ನವಾಗಬೇಕು. ಒಳಿತು-ಕೆಡುಕುಗಳ ಅರಿವನ್ನು ತುಂಬಿದ ಬುದ್ಧಿಗೇ ‘ವಿವೇಕ’ವೆನ್ನುವರು. ಇಂತಹ ಬುದ್ಧಿಯೇ ಬಲಶಾಲಿ.
ಹಾಗಾದರೆ ಬುದ್ಧಿಯಲ್ಲಿ ಎಂತಹ ಅರಿವನ್ನು ತುಂಬಬೇಕೆಂಬುದನ್ನು ಯೋಚಿಸಬೇಕಾಗಿದೆ.
೧. ಮೊದಲನೆಯದಾಗಿ : ಮನುಷ್ಯನಾಗಿ ಜನ್ಮ ಪಡೆದ ಪ್ರತಿಯೊಬ್ಬ ಜೀವಿಯು ತಾನು ಸಂಪೂರ್ಣ ಮಾನವ ಸಮಜದ ಒಂದು ಅವಿಭಾಜ್ಯ ಅಂಗವೆಂಬುದರ ಅರಿವನ್ನು ಬುದ್ಧಿಯಲ್ಲಿ ತುಂಬಿಕೊಳ್ಳಬೇಕು. ನಮ್ಮ ಹಿರಿಯರು ಸಾರಿ ಸಾರಿ ಹೇಳಿದ್ದೂ ಇದನ್ನೇ ‘ವಸುಧೈವ ಕುಟುಂಬಕಮ್’.
೨. ಎರಡನೆಯದಾಗಿ : ಮನುಷ್ಯನನ್ನು ‘ಸಾಮಾಜಿಕ ಪ್ರಾಣಿ’ (Social Animal) ಎಂದು ಗುರುತಿಸಲಾಗಿದೆ. ಅಂದರೆ ಸಮಾಜದಲ್ಲಿದ್ದು, ಸಮಾಜದ ಸಹಾಯದಿಂದ, ಸಮಾಜದೊಡನೆ ಬದುಕುವ, ಬದುಕಬೇಕಾದ ಪ್ರಾಣಿಯು. ಸಮಾಜವನ್ನು ಬಿಟ್ಟು ಬದುಕುವುದು ಅಸಾಧ್ಯ,ಅವನ ಜೀವನದ ಬಹುಪಾಲು ಸಂಗತಿಗಳು ಅವನಿರುವ ಸಮಾಜದಿಂದಲೇ ನಿರ್ಧರಿಸಲ್ಪಡುತ್ತವೆ.
೩. ಮೂರನೆಯದಾಗಿ : ಮನುಷ್ಯನು "ತಾನು ಇತರರೊಡನೆ ಬದುಕಬೇಕು" ಅಂದರೆ "ತಾನೂ ಬದುಕಬೇಕು, ಇತರರನ್ನೂ ಬದುಕಬಿಡಬೇಕು" ಎಂಬ ನೀತಿಯನ್ನು ಬುದ್ಧಿಯಲ್ಲಿ ತುಂಬಿಕೊಂಡು ಅದನ್ನು ಕೃತಿಯಲ್ಲಿಳಿಸಬೇಕು. ಇದೆಲ್ಲ ದೇವರ ದೇಣಿಗೆ. ಮನುಷ್ಯರೆಲ್ಲ ಹಂಚಿಕೊಂಡು ತಿನ್ನಬೇಕು. ದೇವರು ನೀಡಿದ್ದನ್ನು ಇತರರಿಗೆ ಕೊಡದೇ ತಿನ್ನುವವನು ಕಳ್ಳ ಎನ್ನುವ ಅರಿವನ್ನು ಬುದ್ಧಿಯಲ್ಲಿ ತುಂಬಿಕೊಳ್ಳಬೇಕು. ಇದಕ್ಕೆ ಪೂರಕವಾಗಿದೆ ಬೇಂದ್ರೆಯವರ ಸೂತ್ರವಾಕ್ಯವೊಂದು - "ಸಮರಸವೇ ಜೀವನ".
ಈ ಸತ್ಯ ಪ್ರತಿಯೊಬ್ಬನ ಬುದ್ಧಿಯಲ್ಲಿ ಆಳವಾಗಿ ಬೇರೂರಿದಾಗಲೇ ಅವನ ಸಮರ್ಪಕ ಹಾಗೂ ಹಿತಕಾರಕ ವ್ಯಕ್ತಿತ್ವ-ವಿಕಸನ ಸಾಧ್ಯ. ಈ ಸತ್ಯಗಳಿಂದ ನಮ್ಮನ್ನು ವಿಮುಖಗೊಳಿಸುವ, ಮಾನವನಿಗೆ ಕೇಡುಂಟುಮಾಡುವ ಶಕ್ತಿಗಳು ಅಥವಾ ಶತ್ರುಗಳು ಅವನ ದೇಹದಲ್ಲೇ ಮನಮಾಡಿಕೊಂಡಿವೆ. ಅವೇ ಅರಿಷಡ್ವೈರಿಗಳು. (ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರ) ಈ ಒಳವೈರಿಗಳಿಗೆ ಸೋತ ಬುದ್ಧಿಯಿಂದಾಗಿ ಮನುಷ್ಯನು ಇಂದ್ರಿಯಗಳಿಗೆ ಗುಲಾಮನಾಗುತ್ತಾನೆ. ಅವನ ಅಧಃಪತನ ನಿಶ್ಚಿತವಾಗುತ್ತದೆ. ಜಿತೇಂದ್ರಿಯನು ಎಲ್ಲ ಗಳಿಸಿದರೆ, ಅಜಿತೇಂದ್ರಿಯನು ಎಲ್ಲ ಕಳಕೊಳ್ಳುತ್ತಾನೆ. ಹಾಗಾಗಿ ಇಂದ್ರಿಯ ನಿಗ್ರಹವು ವ್ಯಕ್ತಿತ್ವ-ವಿಕಸನದ ಒಂದು ಭಾಗವೇ ಆಗಿದೆ. ಹೀಗೆ ಸಕಲರ ಹಿತಕ್ಕಾಗಿ, ಎಲ್ಲರೊಡನೆ ಬಾಳುವ ಅಗತ್ಯವಿರುವ ಮನುಷ್ಯನು ಸಫಲ ಸುಖೀಜೀವನಕ್ಕಾಗಿ ಅನುಸರಿಸಬೇಕಾದ ಸೂತ್ರವೊಂದನ್ನು ನಮ್ಮ ಹಿರಿಯರು ದಯಪಾಲಿಸಿದ್ದಾರೆ. ಅದೆಂದರೆ, "ತನ್ನಂತೆ ಪರರ ಬಗೆ". ಈ ರೀತಿಯ ಬೌದ್ಧಿಕ ವಿಕಾಸಕ್ಕೆ, ವ್ಯಕ್ತಿತ್ವ-ವಿಕಸನಕ್ಕೆ ಅನುಕೂಲವಾಗುವಂತೆ ನಮ್ಮ ಹಿರಿಯರು ‘ಧರ್ಮದ’ ಬೋಧೆ ಮಾಡಿದರು. ಈ ಸಂದರ್ಭದಲ್ಲಿ ‘ಧರ್ಮದ’ ನಿಜವಾದ ಅರ್ಥ ತಿಳಿದುಕೊಳ್ಳಲೇಬೇಕು. ಇಂದು ಧರ್ಮವೆಂದರೆ ಕೇವಲ ‘religion’ ಅಂದರೆ ‘ದೇವರಲ್ಲಿ ನಂಬಿಕೆ’ ‘ಸಾಂಪ್ರದಾಯಿಕ ಪೂಜಾ-ಪಾಠ’ ಎಂದು ಮುಂತಾಗಿ ತಪ್ಪಾಗಿ ಅರ್ಥ ಮಾಡಿಕೊಂಡು ಧರ್ಮದ ಬಗೆಗೆ ಅಸಂಬದ್ಧ ಪ್ರಲಾಪ ಮಾಡುವವರು ಇದ್ದಾರೆ, ಹಿಂದೆಯೂ ಅಂತವರಿದ್ದರು; ಮುಂದೆಯೂ ಇರಬಹುದು. ಆದರೆ ನಮ್ಮ ಪೂರ್ವಿಕರ ಪ್ರಕಾರ ಧರ್ಮವೆಂದರೆ ಮನುಷ್ಯನಿಗೆ ‘ಮನುಷ್ಯತ್ವ’ ನೀಡುವುದು. ನಿಜವಾದ ಧರ್ಮದ ಅರ್ಥ ವಿಶಾಲವಾದುದು. ಮಾನವ ಜೀವನದ ಎಲ್ಲ ಅಂಗಗಳನ್ನೂ ಧರ್ಮವು ವ್ಯಾಮಿಸಿಕೊಂಡಿದೆ. ಅದು ಸರ್ವಾಧಾರ, ಸರ್ವವ್ಯಾಪಿ, ಸರ್ವಸುಖಪ್ರದ, ಸರ್ವತ್ರ ಶಾಂತಿಪ್ರಸಾರಕ. ಅದುವೇ ಮಾನವಧರ್ಮ, ವಿಶ್ವಧರ್ಮ, ಸನಾತನ ಧರ್ಮ, ಚಿರಂತನಧರ್ಮ, ಭಾರತೀಯಧರ್ಮ. ಅಂತಹ ಧರ್ಮದ ನಿಯಮಗಳು ಇಂತಿವೆ - ಅಹಿಂಸೆ, ಸತ್ಯ, ಕಳ್ಳತನವನ್ನು ಮಾಡದಿರುವುದು, ಶುದ್ಧಿ (ಮಾತು, ಶರೀರ, ಮನಸ್ಸು ಮತ್ತು ಕರ್ಮ), ಇಂದ್ರಿಯ ನಿಗ್ರಹ. ಮಾನವಧರ್ಮದ ಈ ನಿಯಮಗಳನ್ನು ಅರ್ಧೈಸಿ ಕೃತಿಯಲ್ಲಿಳಿಸಬೇಕು. ಆಗಲೇ ಸಂಪೂರ್ಣ ವ್ಯಕ್ತಿತ್ವ-ವಿಕಸನ ಸಾಧ್ಯ.
ವಿಕಸಿತ ವ್ಯಕ್ತಿತ್ವದ ಗುಣಮಟ್ಟ ಅಳೆಯುವುದು ಹೇಗೆ? ಅದು ಹಿತಕಾರಕವೋ ಅಹಿತಕಾರಕವೋ ಎಂದು ನಿರ್ಧರಿಸುವುದು ಹೇಗೆ? ಅದಕ್ಕೆ ತಕ್ಕ ಮಾನದಂಡದ ಬಗೆಗೂ ನಮ್ಮ ಹಿರಿಯರು ಯೋಚಿಸಿದ್ದಾರೆ. ಅದೇನೆಂದರೆ ‘ಬಿತಿದ್ದನ್ನು ಬೆಳೆದುಕೊ’, ’ಸತ್ಕೃತಿಯಿಂದ ಸುಖಫಲ, ಕುಕರ್ಮದಿಂದ ಕಹಿಫಲ’ - ಹೀಗೆ ನಮ್ಮ ಸುಖ-ದುಃಖಗಳಿಗೆ ನಮ್ಮ ಕೃತಿಯೇ ಕಾರಣ. ಆದುದರಿಂದ ವಿಕಸಿತ ವ್ಯಕ್ತಿತ್ವದಿಂದ ಹಿತವಾಗಬೇಕಾದರೆ ಅದು ಕೃತಿರೂಪ ಧರಿಸಿ ಪ್ರಕಟವಾಗಬೇಕು. ಹಿತಕಾರಕ ವ್ಯಕ್ತಿತ್ವ-ವಿಕಸನವಾದವನು ಸುಖಕಾರಕ ಸತ್ಕೃತಿ ಗೈದು ತೋರಿಸಬೇಕು. ಕೃತಿಯೇ ಒಬ್ಬನ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ. ಕೃತಿಯಿಂದಲೇ ವಿಕಸಿತ ವ್ಯಕ್ತಿತ್ವವನ್ನು ಅಳೆಯುವುದು ಸಾಧ್ಯ. ಹಾಗಿದ್ದರೆ ಸತ್ಕೃತಿಯನ್ನು ಪರೀಕ್ಷಿಸುವುದು ಹೇಗೆ? ಎನ್ನುವ ಸಂದೇಹ ತಲೆದೋರಬಹುದು. ಸತ್ಕೃತಿಯನ್ನು ಮೂರು ವಿಧವಾಗಿ ಪರೀಕ್ಷಿಸಿ ನಿರ್ಧರಿಸಲು ಬರುತ್ತದೆ.
೧. ಅದು ಎಲ್ಲರಿಗೂ ತಿಳಿಯಬೇಕೆಂದು ನಾವು ಬಯಸಬೇಕು
೨. ಅದನ್ನು ಮಾಡುವಾಗ ನಾವು ನಾಚಿಕೆ ಪಡಬಾರದು
೩. ಅದರಿಂದ ನಮ್ಮ ಅಂತರಾತ್ಮ ಸಂತುಷ್ಟವಾಗಬೇಕು. - ಇಂತಹ ಕೃತಿಯನ್ನೇ ಸತ್ಕೃತಿಯೆನ್ನುತ್ತೇವೆ.
ಅಂತಿಮವಾಗಿ : ನಮ್ಮ ಹಿರಿಯರು(ಪೂರ್ವಜರು) ಕಂಡು ಹಿಡಿದ ಇನ್ನೊಂದು ಸತ್ಯ ಹೀಗಿದೆ - ಮಾನವರೆಲ್ಲ ಪುಣ್ಯದ ಫಲವಾದ ಸುಖ ಬಯಸುತ್ತಾರೆ; ಆದರೆ ಪುಣ್ಯ ಕಾರ್ಯ ಮಾಡಬಯಸುವುದಿಲ್ಲ. ಅಂತೆಯೇ ಪಾಪದ ಫಲವಾದ ದುಃಖ ಬಯಸುವುದಿಲ್ಲ; ಆದರೆ ಪಾಪದ ಕಾರ್ಯ ಮಾಡೇ ಮಾಡುತ್ತಾರೆ. ಅಂದರೆ ಬೇವಿನ ಮರದಿಂದ ಮಾವು ಪಡೆಯ ಬಯಸುತ್ತಾರೆ. ಮನುಷ್ಯ ಜನಿಸಿದ್ದು ಸಾಯುವುದಕ್ಕಲ್ಲ, ಸಾಧಿಸಲಿಕ್ಕೆ. ಜನ್ಮ-ಮೃತ್ಯುಗಳು ಮನುಷ್ಯನ ಕೈಯಲ್ಲಿಲ್ಲವಾದರೂ ಅವುಗಳ ನಡುವಿನ ಜೀವನ-ಸಾಧನೆ ಪೂರ್ಣವಾಗಿ ಅವನ ಕೈಯಲ್ಲಿದೆ. ಅದಕ್ಕಾಗಿ ಅವನ ವ್ಯಕ್ತಿತ್ವ ಸುಯೋಗ್ಯವಾಗಿ ವಿಕಸಿತವಾಗಬೇಕು. ಅದುವೆ ನಿಜವಾದ ವ್ಯಕ್ತಿತ್ವ-ವಿಕಸನ. ಅದನ್ನು ಕುರಿತು ಭಾರತೀಯ ದೃಷ್ಟಿ ಸ್ಪಷ್ಟವಾಗಿದೆ. ವ್ಯಕ್ತಿತ್ವ-ವಿಕಸನದಿಂದಲೇ ಮಾನವ ಮಹಾಮಾನವನಾಗಬಲ್ಲ, ವಿಶ್ವಮಾನವನಾಗಬಲ್ಲ, ದೇವನಾಗಬಲ್ಲ.


For Further Reading,
- How to quit Smoking? And why?
- Chanakya's Quotes - Chanakya (Indian politician, strategist and writer,350 BC-275 BC)
- NOT to do anything without proper sanctions: Whatever may be the urgency or importance of the job
- I am Me. In all the world, there is no one else exactly like me....
- Personality Development - 5 life lessons I learned from Kung Fu Panda 2, watch the movie trailor too
0 comments:
Post a Comment